ಪ್ರಯಾಗರಾಜ್: ಕೆಲ ದಿನಗಳ ಹಿಂದೆ ಮುಕ್ತಾಯಗೊಂಡ ಮಹಾ ಕುಂಭಮೇಳಕ್ಕೆ (Maha Kumbh) ಟೆಂಟ್ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಕಂಪನಿಯೊಂದರ ಗೊಡೋನ್ನಲ್ಲಿ ಶನಿವಾರ (ಇಂದು) ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 6 ನೀರಿನ ಟ್ಯಾಂಕರ್ಗಳನ್ನ (Water Tenders) ಸ್ಥಳಕ್ಕೆ ತರಿಸಲಾಗಿದ್ದು, ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೀವ್ ಕುಮಾರ್ ಪಾಂಡೆ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದ್ರೆ ಗೊಡೋನ್ ಕೆಲಸ ಮಾಡ್ತಿದ್ದ ರಾಹುಲ್, ಸಿಲಿಂಡರ್ಗಳು ಸ್ಫೋಟಗೊಂಡ ಸದ್ದು ಕೇಳಿಸಿತು ಎಂಬುದಾಗಿ ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆಯುತ್ತಿದೆ.ಬೆಂಕಿ ಬಿದ್ದ ಗೊಡೋನ್ನಲ್ಲಿ ಲಾಗ್ಗಳು ಮತ್ತು ಟೆಂಟ್ ವಸ್ತುಗಳನ್ನು ಸಂಗ್ರಹಿಸಲಾಗಿತ್ತು.